ಬಸ್ರೂರು – ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

0
228

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಪುಸ್ತಕಗಳನ್ನು ಓದುವುದರಿಂದ ಆತ್ಮವಿಶ್ವಾಸ, ಏಕಾಗ್ರತೆ, ಶಿಸ್ತು, ಸೃಜನಶೀಲತೆ ಹೆಚ್ಚುತ್ತದೆ. ಪುಸ್ತುಕಗಳು ಜ್ಞಾನ ಭಂಡಾರವಿದ್ದಂತೆ. ಪುಸ್ತಕಗಳ ಅಧ್ಯಯನದಿಂದ ಜ್ಞಾನವೃದ್ಧಿಯಾಗುವ ಮೂಲಕ ಮಾನವೀಯ ಮೌಲ್ಯಗಳು ಹೆಚ್ಚುತ್ತವೆ ಎಂದು ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ ಹೇಳಿದರು.

Click Here

Click Here

ಸಾಹಿತಿ ಪಾರ್ವತಿ ಜಿ ಐತಾಳ್ ಅವರು ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಲಾದ ಪುಸ್ತಕಗಳನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಶಾ ಸಂತೋಷ್ ಶೆಟ್ಟಿ, ಅಂಪಾರು ಮಾಜಿ ಗ್ರಾಮ ಪಂಚಾಯತ್ ಸದಸ್ಯ ರೋಷಣಿ, ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ ನ ಟ್ರಸ್ಟಿಗಳಾದ ಅಶೋಕ್ ಎನ್, ಸುಧೀರ್ ಕುಮಾರ್, ರಮೇಶ್ ಪೂಜಾರಿ, ಗಣೇಶ್ ಎಸ್ ಬೀಜಾಡಿ, ಕೆಆರ್ ಎಸ್ ಎಂಇ ಟ್ರಸ್ಟ್ ನ ಅಬ್ದುಲ್ ಜುನೈದ್, ಶಾಲಾ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜಾ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಸಂಜಿತ್ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.

Click Here

LEAVE A REPLY

Please enter your comment!
Please enter your name here