ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಚುನಾವಣೆ ಪೂರ್ವ ಸಿದ್ಧತೆ ಹಿನ್ನಲೆ ರಾಜ್ಯಾದ್ಯಂತ ಸಂಚರಿಸುತ್ತಿರುವ ವಿಜಯ ಸಂಕಲ್ಪ ಯಾತ್ರೆಯು ಮಾರ್ಚ್ 14 ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಪ್ರವೇಶಿಸಲಿದ್ದು, ಕ್ಷೇತ್ರ ವ್ಯಾಪ್ತಿಯ ಬಾರ್ಕೂರಿನಲ್ಲಿ ಅದ್ದೂರಿ ಸ್ವಾಗತ ನೇರವೇರಲಿದೆ. ನಂತರ ಬೈಕ್ ಜಾಥದ ಮೂಲಕ ಸೈಬ್ರಕಟ್ಟೆ ತಲುಪಿ ಸೈಬ್ರಕಟ್ಟೆ ಬಸ್ ನಿಲ್ದಾಣ ಸಮೀಪ ಸಾರ್ವಜನಿಕ ಸಭೆ ನಡೆಯಲಿದೆ.
ಈ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಪದಾಧಿಕಾರಿಗಳು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಉಪಸ್ಥಿತರಿರಲಿದ್ದು. ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.