ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಬಳ್ಳೂರು ಶ್ರೀ ಸಾರ್ವಜನಿಕ ಗಣೇಶೋತ್ಸವ 2024-25ನೇ ಸಾಲಿನ ಅಧ್ಯಕ್ಷರಾಗಿ ವೇದಮೂರ್ತಿ ಶ್ರೀಧರ ಉಡುಪ ಆಯ್ಕೆಗೊಂಡಿರುತ್ತಾರೆ.
ಇವರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಧರ್ಮದರ್ಶಿಗಳಾಗಿ ಸೇವೆ ಸಲ್ಲಿಸುತ್ತಿದ್ದು ಬಳ್ಳೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿರುತ್ತಾರೆ. ವಿವಿಧ ಸಂಘ-ಸಂಸ್ಥೆಯ ಧಾರ್ಮಿಕ ಸಲಹೆಗಾರರಾಗಿ ಸೇವೆ ನೀಡುತ್ತಿರುವ ಇವರು ತಮ್ಮ ಸಾಮಾಜಿಕ ಕಾರ್ಯಗಳಿಂದ ಜನಾನುರಾಗಿಯಾಗಿದ್ದಾರೆ. ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ನಿಯುಕ್ತಿಗೊಂಡಿದ್ದಾರೆ.