ಕುಂದಾಪುರ: ಉಚ್ಚಾಟಿತ ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ : ಬಿಜೆಪಿ ಮುಕ್ತ ಮಾಡ್ತೇವೆ ಎಂದ ಕಾಂಗ್ರೆಸ್

0
701

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಶುಕ್ರವಾರವಷ್ಟೇ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಅಧಿಕೃತವಾಗಿ ಉಚ್ಛಾಟಿತಗೊಂಡ ಬಿಜೆಪಿ ಕಾರ್ಯಕರ್ತರು ಹಾಗೂ ಆನಗಳ್ಳಿವಗ್ರಾಮ ಪಂಚಾಯತ್ ಸದಸ್ಯರುಗಳಾದ ಪ್ರಭಾಕರ ಬಂಗೇರ ಹಾಗೂ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ಶನಿವಾರ ಹೇರಿಕುದ್ರುನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ ಮೂಲಕ ಬಿಜೆಪಿಗೆ ಠಕ್ಕರ್ ನೀಡಿದ್ದಾರೆ.

ಶನಿವಾರ ಹೇರಿಕುದ್ರುವಿನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ವಿನೋದ್ ಕ್ರಾಸ್ತಾ ಸಮ್ಮುಖದಲ್ಲಿ ಗ್ರಾಮ ಪಂಚಾಯತ್ ಮಾಜೀ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗು ಸದಸ್ಯ ಗಂಗಾಧರ ಶೆಟ್ಟಿ ಮುಂದಾಳತ್ವದಲ್ಲಿ ಕಾಂಗ್ರೆಸ್ ಸೇರಿದರು.

Click Here

Click Here

ಈ ಸಂದರ್ಭ ಮಾತನಾಡಿದ ಪ್ರಭಾಕರ ಬಂಗೇರ, ಹಾಲಾಡಿ ಶ್ರೀನಿವಾಸ ಶೆಟ್ಟರ ರಾಜಕೀಯ ನಿವೃತ್ತಿಯ ಬಳಿಕ ಕುಂದಾಪುರ ಬಿಜೆಪಿ ಒಡೆದ ಮನೆಯಾಗಿದೆ ಎಂದರು. ಯಜಮಾನನಿಲ್ಲದ ಕುಂದಾಪುರ ಬಿಜೆಪಿ ಗೊಂದಲದ ಗೂಡಾಗಿದೆ ಎಂದರು.

ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಶೆಟ್ಟಿ ಹೇರಿಕುದ್ರು ಮಾತನಾಡಿ, ಹೇರಿಕುದ್ರು ಗ್ರಾಮ ಪಂಚಾಯತ್ ನಲ್ಲಿ ಕಳೆದ 35 ವರ್ಷಗಳಿಂದ ಕಪ್ಪು ಚುಕ್ಕೆಗೆ ಅವಕಾಶ ನೀಡದೇ ಕಾಂಗ್ರೆಸ್ ಆಡಳಿತ ನಡೆಸಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಗ್ರಾಮ ಮಾಡುತ್ತೇವೆ ಎಂದರು.

ದಿನೇಶ್ ಹೆಗ್ಡೆ ಮೊಳಹಳ್ಳಿಯವರು ಸೇರ್ಪಡೆಗೊಂಡ ಇಬ್ಬರಿಗೂ ಕಾಂಗ್ರೆಸ್ ಶಾಲು ಹೊದೆಸಿ, ಪಕ್ಷದ ಧ್ವಜ ನೀಡಿ ಸ್ವಾಗತಿಸಿಕೊಂಡರು.

Click Here

LEAVE A REPLY

Please enter your comment!
Please enter your name here