ಬೈಂದೂರು: ಶನಿವಾರ ತ್ರಾಸಿಯಲ್ಲಿ ಡಾ. ಹೆಚ್.ಎಸ್.ಶೆಟ್ಟರಿಗೆ ಸನ್ಮಾನ, ತ್ರೀ ಹಂಡ್ರೆಡ್ ಟ್ರೀಸ್, ಸಮೃದ್ಧ ಬೈಂದೂರು ಯೋಜನೆ ಅನಾವರಣ

0
731

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಬೈಂದೂರು ತಾಲೂಕಿನ ತ್ರಾಸಿಯ ಕೊಂಕಣ ಖಾರ್ವಿ ಭವನದಲ್ಲಿ ಶನಿವಾರದಂದು
ಡಾ.ಹೆಚ್.ಎಸ್.ಶೆಟ್ಟರಿಗೆ ಸನ್ಮಾನ, ತ್ರೀ ಹಂಡ್ರೆಡ್ ಟ್ರೀಸ್ ಉದ್ಘಾಟನೆ ಹಾಗೂ ಸಮೃದ್ಧ ಬೈಂದೂರು ಲೋಕಾರ್ಪಣೆಗೊಳ್ಳಲಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ

Click Here

Click Here

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉದ್ಯೋಗ, ಆರೋಗ್ಯ, ಶಿಕ್ಷಣ, ಮತ್ಸ್ಯೋದ್ಯಮ ಕೈಗಾರಿಕೆ ಹೀಗೇ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಜೊತೆಗೆ ಖಾಸಗೀ ಸಹಭಾಗಿತ್ವದೊಂದಿಗೆ ಅಭಿವೃದ್ಧಿಯತ್ತ ಸಾಗುವ ದಿಟ್ಟ ಹೆಜ್ಜೆಯೇ ತ್ರೀ ಹಂಡ್ರೆಡ್ ಟ್ರೀಸ್ ಮತ್ತು ಸಮೃದ್ದ ಬೈಂದೂರು ಯೋಜನೆ.

ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಗೌರವ ಡಾಕ್ಟರೇಟ್ ಪಡೆದ ಸಾಧಕ, ಡಾ. ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಹಾಯಧನ ನೀಡಿ ಗೌರವಿಸಲಾಗುತ್ತಿದೆ. ಅಲ್ಲದೇ ಇದೇ ಸಂದರ್ಭ 300 ಶಾಲೆಗಳ ಅಭಿವೃದ್ದಿ ಯೋಜನೆಯ ಉದ್ಘಾಟನೆಯೂ ಇದೇ ಸಂದರ್ಭದಲ್ಲಿ ನಡೆಯಲಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿನಂತಿಸಿದ್ದಾರೆ.

Click Here

LEAVE A REPLY

Please enter your comment!
Please enter your name here