ಕುಂದಾಪುರ :ಭಂಡಾರಕಾರ್ಸ್ ಪಿಯು ಕಾಲೇಜ್ ಮಡಿಲಿಗೆ ಅರುಣ್ಯಾ – 2024

0
235

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ನೆಡೆದ ಆರುಣ್ಯಾ 2024 ಮ್ಯಾನೆಜ್ ಮೆಂಟ್ ಸ್ಪರ್ಧೆ ಸಮಾರೋಪ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಗಣೇಶ ಶೆಟ್ಟಿ ಮೊಳಹಳ್ಳಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದಿಸೆಯಲ್ಲಿ ಕಾಲೇಜಿನ ಬೇರೆ ಬೇರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೋಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿ ವಹಿಸಿದ್ದರು.

Click Here

Click Here

ಕಾರ್ಯಕ್ರಮದಲ್ಲಿ ಶಾರದಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಐಕ್ಯೂಎಸಿ ಸಂಚಾಲಕರಾದ ಸಂದೀಪ್ ಕೆ ಉಪಸ್ಥಿತರಿದ್ದರು.

ಆರುಣ್ಯಾ 2024 ಸಂಚಾಲಕರು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ವಂದಿಸಿರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕುಮಾರ ಪಿ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಪ್ರಮೀಳಾ ಮತ್ತು ಅರ್ಥಶಾಸ್ತ್ರ ಉಪನ್ಯಾಸಕ ಅಕ್ಷಯ ಹೆಗ್ಡೆ, ಮತ್ತು ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ವಿಶ್ವನಾಥ ಆಚಾರ್ಯ ನಿರ್ವಹಿಸಿದರು.

ಅಂತರ್ ಕಾಲೇಜು ಸ್ವರ್ಧೆಯಲ್ಲಿ ಭಂಡಾರ್ಕರ್ ಪಿಯು ಕಾಲೇಜು ಚಾಂಪಿಯನ್ ಶಿಪ್ ಆಗಿ ಪ್ರಥಮ ಬಹುಮಾನ ಪಡೆದರು. ರನ್ಸಸ್ ಆಗಿ ಉಡುಪಿ ಪೂರ್ಣಪ್ರಜ್ಞ ಪಿಯು ಕಾಲೇಜು ಬಹುಮಾನ ಪಡೆದುಕೊಂಡರು.

Click Here

LEAVE A REPLY

Please enter your comment!
Please enter your name here