ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ ಆಯ್ಕೆಯಾಗಿದ್ದಾರೆ.
ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಉಪಧ್ಯಕ್ಷ ಹುದ್ದಗಳಿಗೆ ನಡೆದ ಚುನಾವಣೆಯಲ್ಲಿ ಉಮೇಶ್ ಶೆಟ್ಟಿ ಕಲ್ಗದ್ದೆ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಿರ್ದೇಶಕರಾದ ಸಚ್ಚಿದಾನಂದ ವೈದ್ಯ, ಮಂಜುನಾಥ್ ಕುಲಾಲ್, ವಿಜಯ್ ಮಡಿವಾಳ, ರವಿ ಕುಲಾಲ್, ಮಮತಾ ಆರ್ ಶೆಟ್ಟಿ, ಲತಾ ಡಿ ಎಸ್, ಗಿರಿಜಾ, ರಾಜೀವ ಶೆಟ್ಟಿ, ರಾಮಚಂದ್ರ ದೇವಾಡಿಗ, ಸದಾಶಿವ ಶೆಟ್ಟಿ, ಕೃಷ್ಣ ನಾಯಕ್ ಉಪಸ್ಥಿತರಿದ್ದರು.
ಚುನಾವಣಾ ಅಧಿಕಾರಿ ಸುಮಿತ್ರಾ ಕುಮಾರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೀಶ್ ಸಹಕರಿಸಿದರು.