ಕೋಟದಲ್ಲಿ ಬೃಹತ್ ಆಧಾರ್ ಮೇಳ : ಸರಕಾರ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪಂಚವರ್ಣದ ಕಾರ್ಯ ಶ್ಲಾಘನೀಯ – ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ

0
464

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸರಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪಂಚವರ್ಣ ಸಂಘಟನೆಯ ಕಾರ್ಯ ಅತ್ಯಂತ ಪ್ರಶಂಸನೀಯವಾದದ್ದು ಎಂದು ಬ್ರಹ್ಮಾವರ ತಹಶಿಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಹೇಳಿದರು.

ಬುಧವಾರ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ
ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ಆಶ್ರಯದಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಎಜ್ಯುಕೇರ್ ಸಂಸ್ಥೆ ಕೋಟ, ಗ್ರಾಮಪಂಚಾಯತ್ ಕೋಟ ಇವರ ಸಹಭಾಗಿತ್ವದಲ್ಲಿ ಆಧಾ‌ರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ, ಪಿ ಎಂ ವಿಶ್ವಕರ್ಮ ಯೋಜನೆ, ಮೀನುಗಾರಿಕಾ ಕಾರ್ಡ್, ರಿಕ್ಷಾ ಚಾಲಕರ ಇ. ಕಾರ್ಡ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸರಕಾರದ ಪ್ರತಿ ಸೌಲಭ್ಯಗಳಿಗೆ ಆಧಾರ್ ಕಾಡ್೯. ಪ್ರಮುಖ ಪಾತ್ರ ವಹಿಸುತ್ತದೆ,ಈ ದಿಸೆಯಲ್ಲಿ ಪಂಚವರ್ಣ ಸಂಘಟನೆ ಕ್ರೀಯಾಶೀಲಾತ್ಮಕ ಕಾರ್ಯಗಳಿಗೆ ಒತ್ತು ನೀಡಿ ಜನಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

Click Here

Click Here

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ಅಮೃತೇಶ್ವರಿ ದೇಗುಲದ ಧರ್ಮದರ್ಶಿ ಆನಂದ್ ಸಿ ಕುಂದರ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಉಡುಪಿ ಅಂಚೆ ವಿಭಾಗದ ಅಧೀಕ್ಷರಾದ ರಮೇಶ್ ಪ್ರಭು, ಕುಂದಾಪುರ ದಕ್ಷಿಣ ಉಪ ವಿಭಾಗದ ಅಂಚೆ ನಿರೀಕ್ಷಕ ನಾಗಾಂಜನೇಯಲು, ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಸದಸ್ಯರಾದ ಅಜಿತ್ ದೇವಾಡಿಗ, ವನೀತಾ ಶ್ರೀಧರ ಆಚಾರ್, ಶಿವರಾಮ ಶೆಟ್ಟಿ, ಉಡುಪಿ ಕಾರ್ಮಿಕ ಇಲಾಖೆಯ ಅಧಿಕಾರಿ ಮಲ್ಲಿಕ್ ಪ್ರಸಾದ್, ಕೋಟ ಗ್ರಾಮಪಂಚಾಯತ್ ಪಿ.ಡಿ ಒ ಸುರೇಶ್ ಬಂಗೇರ, ಗ್ರಾಮ ಲೆಕ್ಕಿಗ ಚಲುವರಾಜ್, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷ ಲಲಿತಾ ಪೂಜಾರಿ, ಸ್ಥಾಪಾಕಾಧ್ಯಕ್ಷ ಸುರೇಶ್, ಏಜುಕೇರ್ ಸಂಸ್ಥೆಯ ಚೇತನ್ ಬಂಗೇರ, ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಕಾರ್ಯದರ್ಶಿ ನಿತೀನ್ ಕುಮಾರ್ ವಂದಿಸಿದರು.

ಸುಮಾರು 300ಕ್ಕೂ ಅಧಿಕ ಮಂದಿ ಆಧಾರ್ ಹಾಗೂ 150ಕ್ಕೂ ಅಧಿಕ ಮಂದಿ ಆಟೋ ಇ ಕಾಡ್೯ ಜತೆಗೆ ಸರಕಾರದ ವಿವಿಧ ಯೋಜನಾ ಅಭಿಯಾನದ ಪ್ರಯೋಜನ ಪಡೆದರು.

Click Here

LEAVE A REPLY

Please enter your comment!
Please enter your name here