ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟತಟ್ಟು, ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಆಸರೆಯಲ್ಲಿ ಮೇ 4 ರಂದು ಕೋಟದ ಕಾರಂತ ಥೀಮ್ ಪಾರ್ಕಿನಲ್ಲಿ ನಡೆಯುವ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ, ಕುಂದಾಪ್ರ ಕನ್ನಡ ಹರಿಕಾರ, ಶಿಕ್ಷಕ ಪ್ರಖರ ವಾಗ್ಮಿ ನಾಡು ನುಡಿ ನೆಲ ಜಲದ ಬಗ್ಗೆ ಕಾರ್ಯವೆಸಗುತ್ತಿರುವ ಡಾ. ಅಣ್ಣಯ್ಯ ಕುಲಾಲ ಉಳ್ತೂರು ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ಕಾರ್ಯಾಧ್ಯಕ್ಷರಾದ ಆನಂದ ಸಿ. ಕುಂದರ್, ಅಧ್ಯಕ್ಷರಾದ ಸತೀಶ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪಿ. ಡಿ. ಓ. ರವೀಂದ್ರ ರಾವ್ ತಿಳಿಸಿದ್ದಾರೆ.