ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಮಂಗಳವಾರದಂದು ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಅಧ್ಯಕ್ಷರಾದ ಸತೀಶ್ ಬಾರಿಕೆರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಹಿಂದುಳಿದ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಕಾರ್ಯವೈಖರಿ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಠ್ಠಲ್ ಪೂಜಾರಿ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಸುರೇಂದ್ರ ಪಣಿಯೂರ್, ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಉಪಾಧ್ಯಕ್ಷರಾದ ಮನೋಜ್ ಕರ್ಕೇರಾ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಒಬಿಸಿ ಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜೀವನ್ ಅಂಕದಕಟ್ಟೆ, ದಯಾನಂದ ಖಾರ್ವಿ ಮತ್ತು ಮೋರ್ಚಾದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಂಡಲದ ಕಾರ್ಯದರ್ಶಿ ಸುರೇಂದ್ರ ಸಂಗಮ್ ವಂದೇ ಮಾತರಂ ಗೀತೆ ಹಾಡಿದರು, ಪುಷ್ಪ ಅವರು ಮೋರ್ಚಾದ ಕಾರ್ಯವೈಖರಿಯ ವರದಿ ನೀಡಿದರು, ಜೀವನ್ ಅಂಕದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.