ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕುಂದಾಪುರ ಮಂಡಲ ವತಿಯಿಂದ ಜನಸಂಘ ಸಂಸ್ಥಾಪಕರು, ಪಕ್ಷದ ಕಾರ್ಯಕರ್ತರ ಆದರ್ಶ ಪ್ರಾಯರಾದ ದಿವಂಗತ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮಜಯಂತಿಯ ಪ್ರಯುಕ್ತ ಪಕ್ಷದ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಕಾರ್ಯದರ್ಶಿಗಳಾದ ಸುರೇಂದ್ರ ಸಂಗಮ್, ಸಂತೋಷ್ ಶೆಟ್ಟಿ ಹಾಲಾಡಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ,ಆಶಾಲತ ನಾಯ್ಕ್, ಕಾರ್ಯಕಾರಿಣಿ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ನಗರ ಪ್ರಾಧಿಕಾರ ಅಧ್ಯಕ್ಷರಾದ ವಿಜಯ್ ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಂತೋಷ ಶೆಟ್ಟಿ, ಪುರಸಭಾ ಸದಸ್ಯೆ ವನಿತಾ ಬಿಲ್ಲವ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಖಾರ್ವಿ, ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ ಉಪಸ್ಥಿತರಿದ್ದರು.