ಕುಂದಾಪುರ ತಾಲ್ಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

0
707

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಬಾಲಕ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಉದ್ಗಾಟನಾ ಸಮಾರಂಭದಲ್ಲಿ ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಆದ ಮೋಹನ್ ದಾಸ್ ಶೆಣೈ ಇವರು ಪಂದ್ಯಾವಳಿಯನ್ನು ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಸತೀಶ್ ಕುಮಾರ್ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕುಂದಾಪುರ ವಲಯದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ, ಕುಂದಾಪುರ ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಚಂದ್ರ ಶೆಟ್ಟಿ , ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ದತ್ತಾತ್ರೇಯ ನಾಯಕ್ , ಕಾಲೇಜಿನ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Click Here

Click Here

ಸಂಸ್ಥೆಯ ಉಪ ಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಸ್ವಾಗತಿಸಿದರು. ಪ್ರಕಾಶ್ಚಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯ ಮಡಿವಾಳ ಎಂ ಕಾರ್ಯಕ್ರಮ ನಿರ್ವಹಿಸಿ ಪಂದ್ಯಾಟವನ್ನು ಸಂಘಟಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ವಿಭಾಗದ ಬಹುಮಾನಗಳ ಪ್ರಾಯೋಜಕರಾದ ಜಯಶೀಲ ಶೆಟ್ಟಿ ಅಧ್ಯಾಪಕರು ಹಾಗೂ ಕುಂದಾಪುರ ಬುಕ್ ಹೌಸ್ ನ ಮಾಲಕರು ಬಹುಮಾನವನ್ನು ವಿತರಿಸಿದರು.

ಬಾಲಕರ ವಿಭಾಗ ಪ್ರಥಮ
ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ

ಬಾಲಕರ ವಿಭಾಗ ದ್ವಿತೀಯ
ಸರಕಾರಿ ಪ್ರೌಢಶಾಲೆ ಕಾಳಾವರ

ಬಾಲಕಿಯರ ವಿಭಾಗ ಪ್ರಥಮ
ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ

ಬಾಲಕಿಯರ ವಿಭಾಗ ದ್ವಿತೀಯ
ಎಸ್ ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ

Click Here

LEAVE A REPLY

Please enter your comment!
Please enter your name here