ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ ,ಗಿಳಿಯಾರು ಯುವಕ ಮಂಡಲ ಗಿಳಿಯಾರು,ಮಣೂರು ಫ್ರೆಂಡ್ಸ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ ಇವರುಗಳ ಸಹಯೋಗದಲ್ಲಿ 19ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಸೆ.24ಶನಿವಾರ ಸಂಜೆ 4.ಗ ನಡೆಯಲಿದೆ.
ಈ ಬಾರಿ ಕೋಟ ಪರಿಸರದ ಹೈನುಗಾರಿಕೆ ಮತ್ತು ಕೃಷಿ ಕೇತ್ರದಲ್ಲಿ ಅಗಾಧ ಸಾಧನೆಗೈದ ಕದ್ರಿಕಟ್ಟು ಶಾರದ ರಾಮಚಂದ್ರ ಆಚಾರ್ಯ ಇವರನ್ನು ಗೌರವಿಸಲಾಗುವುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.