ಹೆಮ್ಮಾಡಿ :ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0
551

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ; ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ HCES ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯಿಂದ ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿ
ಬೆಳ್ಳಿ ಪದಕ, ಆರ್ಯ ಮೊಗವೀರ ದ್ವಿತೀಯ ಪಿ.ಯು‌‌.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಮೂಲಕ ಸಾಧನೆ ಮೆರೆದಿದ್ದಾರೆ.

Click Here

Click Here

ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here